ದೇವರ ದೃಷ್ಟಿಕೋನದಿಂದ ಜೀವನವನ್ನು ನೋಡುವುದು ಮತ್ತು ದೇವರು ನಿರ್ಧಾರಗಳನ್ನು ತೆಗೆದುಕೊಳ್ಳುವ ರೀತಿಯಲ್ಲಿಯೇ ನಿರ್ಧಾರಗಳನ್ನು ತೆಗೆದುಕೊಳ್ಳುವಂಥ ಸಾಮರ್ಥ್ಯವೇ ಜ್ಞಾನವಾಗಿದೆ.
ದೇವರು ನಿಮಗೆ ಜ್ಞಾನವನ್ನು ನೀಡುವುದಾಗಿ ವಾಗ್ದಾನ ಮಾಡಿದ್ದಾರೆ – ನೀವು ಅದನ್ನು ಸರಿಯಾದ ಮನೋಭಾವದಿಂದ/ವರ್ತನೆಯಿಂದ ಕೇಳಿದರೆ ಮಾತ್ರ, ಅದು ವಿಶ್ವಾಸದಲ್ಲಿದೆ .
ದೇವರು ವಿಶ್ವಾಸವನ್ನು ಮೆಚ್ಚುತ್ತಾರೆ ಮತ್ತು ಆತನನ್ನು ಜಾಗ್ರತೆಯಾಗಿ ಹುಡುಕುವವನಿಗೆ/ಅರಸುವವನಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.
”ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ. ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು. ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ…” (ಯಾಕೋಬ 1:5-8)
May 12
There is now no condemnation for those who are in Christ Jesus, because through Christ Jesus the law of the Spirit of life in Christ has set me free from