ಸೈತಾನನು ದೇವ ಜನರನ್ನು ದೂಷಣೆ (ಸುಳ್ಳು ಮತ್ತು ಹಾನಿಕಾರಕ ಹೇಳಿಕೆಗಳನ್ನು ನೀಡುತ್ತಾ) ಮಾಡಿದಾಗ, ಅವನು ಅದನ್ನು ನಿಜವಾಗಿಯೂ ದೇವರಿಗೇ ಮಾಡುತ್ತಿದ್ದಾನೆ ಎಂದರ್ಥ.
ಮನುಷ್ಯನ ಅಪಪ್ರಚಾರ ಮತ್ತು ತಿರಸ್ಕಾರವು ದೇವರ ಕೋಪವನ್ನು ಪ್ರಚೋದಿಸುತ್ತದೆ.
ದುಷ್ಟನ ವರ್ತನೆಗಳನ್ನು (ಕುತಂತ್ರಗಳನ್ನು) ದೇವರೇ ಖಂಡಿಸುತ್ತಾರೆ.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯುಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ-ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದಿದೆ.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.(ಜೆಕರ್ಯ 3:2)
April 19
There is no fear in love. But perfect love drives out fear, because fear has to do with punishment. The one who fears is not made perfect in love.—1 John